ಎಲ್ಲರ ದಾಖಲೆಗಳನ್ನು ಕುಟ್ಟಿ ಕುಟ್ಟಿ ಪುಡಿ ಮಾಡುವಂತಹ ಪ್ರಾಜೆಕ್ಟ್ ಗೆ ಕೈ ಹಾಕಿದ ಕಿಚ್ಚ. ಮುಂದಿನ ಬಿಗ್ ಪ್ಲಾನ್ ಏನು ಗೊತ್ತೇ??

8

Get real time updates directly on you device, subscribe now.

ನಮಸ್ಕಾರ ಸ್ನೇಹಿತರೇ ನಿಮಗೆಲ್ಲ ತಿಳಿದಿರುವಂತೆ ಕನ್ನಡ ಚಿತ್ರರಂಗದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ರವರು ತಮ್ಮ ನಟನೆಯ ಮೂಲಕ ಭಾರತೀಯ ಚಿತ್ರರಂಗದ ಅತ್ಯಂತ ತಮ್ಮ ಛಾಪನ್ನು ಮೂಡಿಸಿದ್ದಾರೆ. ಹೌದು ಸ್ನೇಹಿತರೆ ಭಾರತೀಯ ಚಿತ್ರರಂಗದಲ್ಲಿ ಯಾವುದೇ ಬಿಗ್ ಬಜೆಟ್ ನ ಸಿನಿಮಾಗಳು ಪ್ರಾರಂಭವಾದರೂ ಕೂಡ ಆ ಚಿತ್ರದ ನಿರ್ದೇಶಕರು ಹಾಗೂ ನಿರ್ಮಾಪಕರು ನಮ್ಮ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ಕನ್ನಡ ಚಿತ್ರರಂಗದ ಪರವಾಗಿ ಇರಬೇಕೆಂದು ಆಸೆ ಪಡುತ್ತಾರೆ.

ಹೌದು ಸ್ನೇಹಿತರೆ ಒಂದು ಸಮಯದಲ್ಲಿ ಕನ್ನಡ ಚಿತ್ರರಂಗದ ಐರನ್ ಲೆಗ್ ಎಂದು ಕಿಚ್ಚ ಸುದೀಪ್ ರವರು ಕರೆಯಲ್ಪಡುತ್ತಿದ್ದರು. ಆದರೆ ಈಗ ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಭಾದ್ಷಾ ಎಂದು ಕಿಚ್ಚ ಸುದೀಪ್ ರವರು ಕರೆಯಲ್ಪಡುತ್ತಿದ್ದಾರೆ. ಇದುವರೆಗೂ ಕಿಚ್ಚ ಸುದೀಪ್ ಅವರು ಕನ್ನಡ ತಮಿಳು ತೆಲುಗು ಹಿಂದಿ ಮಲಯಾಳಂ ಹೀಗೆ ಎಲ್ಲಾ ಭಾಷೆಗಳಲ್ಲಿ ಕೂಡ ನಟಿಸುವ ಮೂಲಕ ಅಭಿಮಾನಿಗಳನ್ನು ಸಂಪಾದಿಸಿರುವ ಕನ್ನಡದ ನಟನಾಗಿದ್ದಾರೆ. ಇಲ್ಲಿಯವರೆಗೂ ಕಿಚ್ಚ ಸುದೀಪ್ ರವರ ಪ್ರತಿಭೆಯನ್ನು ಸರಿಯಾಗಿ ಉಪಯೋಗಿಸಿಕೊಂಡು ಅಂತಹ ಏಕೈಕ ನಿರ್ದೇಶಕ ಎಂದರೆ ಎಸ್ ರಾಜಮೌಳಿ ಅದು ಕೂಡ ಈಗ ಚಿತ್ರದ ಮೂಲಕ.

ಆದರೆ ಅವರ ಪ್ರತಿಭೆಯನ್ನು ಸರಿಯಾಗಿ ಉಪಯೋಗಿಸಿಕೊಳ್ಳಬಲ್ಲಂತಹ ಕನ್ನಡ ನಿರ್ದೇಶಕ ಯಾರು ಇಲ್ಲ ಎಂಬ ಬೇಸರ ಕನ್ನಡ ಅಭಿಮಾನಿಗಳಲ್ಲಿ ಇತ್ತು. ಆದರೆ ಈ ಬೇಸರದ ವಿಷಯ ಅತ್ಯಂತ ಶೀಘ್ರದಲ್ಲಿ ನಿವಾರಣೆಯಾಗುವ ಎಲ್ಲ ಸಾಧ್ಯತೆಗಳು ಇವೆ ಸ್ನೇಹಿತರೇ. ಹೌದು ಸ್ನೇಹಿತರೆ ಈಗ ಬರುತ್ತಿರುವ ಸುದ್ದಿಯ ಪ್ರಕಾರ ಕಿಚ್ಚ ಸುದೀಪ್ ರವರಿಗೆ ಮುಂದಿನ ದಿನಗಳಲ್ಲಿ ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ರವರು ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿಗಳು ಸಾಕಷ್ಟು ಹರಿದಾಡುತ್ತಿವೆ. ಹೌದು ಸ್ನೇಹಿತರೆ ಬಿಗ್ ಬಜೆಟ್ ನ ಪ್ಯಾನ್ ಇಂಡಿಯಾ ಚಿತ್ರಕ್ಕೆ ಕಿಚ್ಚ ಸುದೀಪ್ ನಾಯಕನಟನಾಗಿ ಹಾಗೂ ಪ್ರಶಾಂತ್ ನೀಲ್ ರವರು ನಿರ್ದೇಶಕನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಇದು ಎಷ್ಟರ ಮಟ್ಟಿಗೆ ನಿಜವಾಗುತ್ತದೆ ಎಂಬುದಾಗಿ ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ.

Get real time updates directly on you device, subscribe now.