ಜೀವನದ ಮಹತ್ವದ ಹೆಜ್ಜೆಯ ಮುಂದೆ ಎಡವಿದ ಪುನೀತ್, ಇನ್ನು ಒಂದು ದಿನ ಬದುಕಿದ್ದರೆ ಹೆಜ್ಜೆ ಇಟ್ಟೆ ಬಿಡುತ್ತಿದ್ದರು ಏನು ಗೊತ್ತೇ??
ನಮಸ್ಕಾರ ಸ್ನೇಹಿತರೇ ಕನ್ನಡ ಚಿತ್ರರಂಗ ಕಂಡಂತಹ ಧೀಮಂತ ನಾಯಕ ನಟರಲ್ಲಿ ಒಬ್ಬರಾದ ಅಂತಹ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರು ಇಂದು ಹೃದಯಾಘಾತದಿಂದಾಗಿ ಕೋಟ್ಯಾಂತರ ಅಭಿಮಾನಿಗಳನ್ನು ಬಿಟ್ಟು ಬಾರದ ಲೋಕದತ್ತ ಪಯಣ ಬೆಳಿಸಿದ್ದಾರೆ. ಹೌದು ಗೆಳೆಯರೇ ಇಂದು ಬೆಳಿಗ್ಗೆ ಸಮಯದಲ್ಲಿ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಹೃದಯಾಘಾತ ಸಂಭವಿಸಿದ್ದು ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಸಂದರ್ಭದಲ್ಲಿ ನುರಿತ ತಜ್ಞವೈದ್ಯರ ತಂಡ ಮೂರು ಗಂಟೆಗಳ ಕಾಲ ನಡೆಸಿದ ಪ್ರಯತ್ನ ಫಲಕಾರಿಯಾಗದೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರು 46ನೇ ವಯಸ್ಸಿಗೆ ಕೊನೆಯುಸಿರನ್ನು ಎಳೆದಿದ್ದಾರೆ. ಈ ಸಂದರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರನ್ನು ನೋಡಲು ಆಸ್ಪತ್ರೆಗೆ ಸಾಕಷ್ಟು ಗಣ್ಯಾತಿಗಣ್ಯರು ಬಂದಿದ್ದಾರೆ. ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ಆಗಿರುವ ಬಸವರಾಜ ಬೊಮ್ಮಾಯಿ ಅವರು ಕೂಡ ಪವರ್ಸ್ಟಾರ್ ಪುನೀತ್ ರಾಜಕುಮಾರ್ ಅವರನ್ನು ವಿಕ್ರಂ ಆಸ್ಪತ್ರೆಯಲ್ಲಿ ಬಂದು ಭೇಟಿಯಾಗಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಿಧನರಾಗಿರುವ ಸುದ್ದಿಯನ್ನು ಘೋಷಿಸಿದ್ದು ಕೂಡ ನಮ್ಮ ನಾಡಿನ ಮುಖ್ಯಮಂತ್ರಿಗಳ ಆಗಿರುವ ಬಸವರಾಜ ಬೊಮ್ಮಾಯಿ ಅವರು. ಇನ್ನು ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ರವರು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರಿಗೆ ನವೆಂಬರ್ 1 ಕನ್ನಡ ರಾಜ್ಯೋತ್ಸವ ದಿನದಂದು ಮಹತ್ವದ ದಿನವಾಗಿತ್ತು ಆದರೆ ಅದಕ್ಕಿಂತ ಮುಂಚೆ ನಮ್ಮನ್ನೆಲ್ಲ ಅಗಲಿದ್ದಾರೆ ಎಂಬುದಾಗಿ ಹೇಳಿದ್ದಾರೆ. ಹೌದು ಗೆಳೆಯರೇ, ನನಗೆ ನಿನ್ನೆ ಫೋನ್ ಮಾಡಿ ಪುನೀತ್ ರಾಜ್ಕುಮಾರ್ ಮಾತನಾಡಿ ನಿಮ್ಮನ್ನು ಭೇಟಿ ಮಾಡಬೇಕು ಎಂದಿದ್ದರು, ಅದಕ್ಕೆ ಸಮಯ ಕೂಡ ನಿಗದಿ ಮಾಡಿದ್ವಿ ಯಾಕೆಂದರೆ ನವೆಂಬರ್ 1ರಂದು ಬಸವರಾಜ ಬೊಮ್ಮಾಯಿ ರವರಿಂದ ತಮ್ಮ ಅಧಿಕೃತ ವೆಬ್ಸೈಟ್ ಅನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರು ಬಿಡುಗಡೆ ಮಾಡಲು ಸಜ್ಜಾಗಿದ್ದರು. ಆದರೆ ವಿಧಿ ಅದಕ್ಕೆ ಅವಕಾಶ ನೀಡಲಿಲ್ಲ.