ಪುನೀತ್ ಅವರ ಆಗಲಿಕೆಯ ನೋವಿನಲ್ಲೂ ತುಸು ಸಂತೋಷದ ಸುದ್ದಿ ಕೊಟ್ಟ ಅಶ್ವಿನಿ. ಅಭಿಮಾನಿಗಳೇ ಕೊಂಚ ನಿರಾಳ. ಏನು ಗೊತ್ತೇ??

10

Get real time updates directly on you device, subscribe now.

ನಮಸ್ಕಾರ ಸ್ನೇಹಿತರೇ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡು ಈಗಾಗಲೇ ಹಲವಾರು ದಿನಗಳು ಕಳೆದರೂ ಅವರಿಗೆ ನಡೆಯಬೇಕಾಗಿದ್ದ ಎಲ್ಲ ಧಾರ್ಮಿಕ ವಿಧಿವಿಧಾನ ಕಾರ್ಯಕ್ರಮಗಳು ಈಗಾಗಲೇ ಮುಗಿದಿದೆ. ಇನ್ನು ಮೊನ್ನೆಯಷ್ಟೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಮ್ಮಿಕೊಂಡಿದ್ದ ಪುನೀತ್ ನಮನ ಕಾರ್ಯಕ್ರಮವು ಕೂಡ ಈಗಾಗಲೇ ಸಾವಿರಾರು ದಕ್ಷಿಣ ಭಾರತ ಚಿತ್ರರಂಗದ ಸೆಲೆಬ್ರಿಟಿಗಳ ಸಮ್ಮುಖದಲ್ಲಿ ಸಂಪೂರ್ಣಗೊಂಡಿದೆ.

ಈ ಸಂದರ್ಭದಲ್ಲಿ ಅಪ್ಪು ಅಭಿಮಾನಿಗಳಿಗೆ ಅಶ್ವಿನಿ ಪುನೀತ್ ರಾಜಕುಮಾರ್ ರವರಿಂದ ಒಂದು ಸಂತೋಷದ ಸುದ್ದಿ ಸಿಕ್ಕಿದೆ. ಹಿಂದೇ ಕೇವಲ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಅಧಿಕೃತ ಖಾತೆಯನ್ನು ಹೊಂದಿದ್ದು ಪಿಆರ್ಕೆ ಪ್ರೊಡಕ್ಷನ್ಸ್ ಕುರಿತಂತೆ ಎಲ್ಲ ಮಾಹಿತಿಗಳನ್ನು ಕೂಡ ಅವರೇ ಹೊರ ಹಾಕುತ್ತಿದ್ದರು. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಪುನೀತ್ ನಮನ ಕಾರ್ಯಕ್ರಮವಾದ ನಂತರ ಅಶ್ವಿನಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಪತ್ರವನ್ನು ಬರೆದಿದ್ದಾರೆ.

ಅದೇನೆಂದರೆ ಅಭಿಮಾನಿಗಳಲ್ಲಿ ಪುನೀತ್ ರವರನ್ನು ಕಳೆದುಕೊಂಡಿರುವ ದುಖ ಎಷ್ಟೇ ಇದ್ದರೂ ಕೂಡ ಅವರನ್ನು ಗೌರವಯುತವಾಗಿ ಕಳುಹಿಸಿಕೊಡಲು ಸಂಯಮದಿಂದ ವರ್ತಿಸಿ ದಕ್ಕಾಗಿ ಅಭಿಮಾನಿಗಳಿಗೆ ಧನ್ಯವಾದಗಳನ್ನು ಕೋರಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಖಾತೆಯನ್ನು ಕೂಡ ತೆರೆದಿದ್ದಾರೆ. ಈ ವಿಚಾರದ ಕುರಿತಂತೆ ಅಭಿಮಾನಿಗಳು ಸಾಕಷ್ಟು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಈ ಮೂಲಕ ಪುನೀತ್ ರಾಜಕುಮಾರ್ ಅವರು ನಡೆಸಿಕೊಂಡು ಹೋಗುತ್ತಿದ್ದ ಪಿಆರ್ ಕೆ ಪ್ರೊಡಕ್ಷನ್ ಅನ್ನು ಅಶ್ವಿನಿ ಪುನೀತ್ ರಾಜಕುಮಾರ್ ಅವರು ನಡೆಸಿಕೊಂಡು ಹೋಗುವುದು ಕನ್ಫರ್ಮ್ ಆಗಿದೆ. ಈ ವಿಚಾರದ ಕುರಿತಂತೆ ನಿಮ್ಮ ಅನಿಸಿಕೆ ಏನೆಂಬುದನ್ನು ನಮ್ಮಂದಿಗೆ ಹಂಚಿಕೊಳ್ಳಿ.

Get real time updates directly on you device, subscribe now.