ರಾಹುಲ್ ನಾಯಕನಾದ ಬೆನ್ನಲ್ಲೇ ಇಡೀ ತಂಡಕ್ಕೆ ಸಿಹಿ ಸುದ್ದಿ ನೀಡಿದ ಬಿಸಿಸಿಐ, ಇದು ನಾಯಕರ ಅದೃಷ್ಟ ಎಂದ ನೆಟ್ಟಿಗರು ಯಾಕೆ ಗೊತ್ತೇ??

12

Get real time updates directly on you device, subscribe now.

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಈಗಾಗಲೇ ಈ ಬಾರಿಯ ಐಪಿಎಲ್ ಮುಗಿದಿದ್ದು ಭಾರತೀಯ ಕ್ರಿಕೆಟ್ ತಂಡ ಸೌತ್ ಆಫ್ರಿಕಾದ ವಿರುದ್ಧ 5 ಟ್ವೆಂಟಿ-20 ಪಂದ್ಯಗಳ ಸರಣಿಯನ್ನು ಆಡಬೇಕಾಗಿದೆ.ಇನ್ನು ಈ ಬಾರಿ ಭಾರತೀಯ ಕ್ರಿಕೆಟ್ ತಂಡದ ಕಪ್ತಾನನಾಗಿ ಕೆ ಎಲ್ ರಾಹುಲ್ ಅವರು ಆಯ್ಕೆಯಾಗಿದ್ದು ರೋಹಿತ್ ಶರ್ಮ ಹಾಗೂ ವಿರಾಟ್ ಕೊಹ್ಲಿ ಜಸ್ಪ್ರೀತ್ ಬುಮ್ರಾ ಸೇರಿದಂತೆ ಹಲವಾರು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಇದೇ ಜೂನ್ 9 ರಿಂದ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮೊದಲ ಪಂದ್ಯದಿಂದ ಪ್ರಾರಂಭವಾಗಲಿದೆ ಈ ಸರಣಿ. ಎಲ್ಲಾ ಭಾರತೀಯ ಆಟಗಾರರನ್ನು ಜುಲೈ ಐದರ ಒಳಗಾಗಿ ದೆಹಲಿಗೆ ಬರಲು ಮಂಡಳಿ ತಿಳಿಸಿದೆ.

ಈಗಾಗಲೇ ಸೌತ್ ಆಫ್ರಿಕಾ ತಂಡ ದೆಹಲಿಯನ್ನು ತಲುಪಿದೆ ಎಂದು ಸುದ್ದಿಗಳು ಈಗಾಗಲೇ ಅಧಿಕೃತವಾಗಿ ಬರಲಾರಂಭಿಸಿವೆ. ಜೂನ್ 19ರವರೆಗೆ ಈ ಐದು ಟಿ20 ಪಂದ್ಯಗಳ ಸರಣಿ ನಡೆಯಲಿದೆ. ಇದಾದ ನಂತರ ಭಾರತೀಯ ಕ್ರಿಕೆಟ್ ತಂಡ ತಿಂಗಳ ಕೊನೆಯಲ್ಲಿ ಐರ್ಲೆಂಡ್ ವಿರುದ್ಧದ ಎರಡು ಟ್ವೆಂಟಿ-20 ಪಂದ್ಯಗಳಿಗಾಗಿ ಐರ್ಲೆಂಡ್ ಗೆ ಪ್ರಯಾಣವನ್ನು ಬೆಳೆಸಲಿದೆ. ಈ ನಡುವೆ ಭಾರತೀಯ ಕ್ರಿಕೆಟ್ ತಂಡದ ಆಟಗಾರರಿಗೆ ಒಂದು ಶುಭ ಸುದ್ದಿ ಸಿಕ್ಕಿದೆ.

ಅದೇನೆಂದರೆ ಬರೋಬ್ಬರಿ ಕಳೆದ ಎರಡು ವರ್ಷಗಳಿಂದಲೂ ಕೂಡ ಮಹಾಮಾರಿ ಕಾರಣದಿಂದಾಗಿ ಬಯೋ ಬಬಲ್ ನಲ್ಲಿ ಭಾರತೀಯ ಆಟಗಾರರು ಇರಬೇಕಾಗಿತ್ತು. ಈ ಕಾರಣದಿಂದಾಗಿ ಅವರ ಮಾನಸಿಕ ಸ್ಥಿತಿಯ ಮೇಲೆ ಸಾಕಷ್ಟು ಒತ್ತಡ ಬೀಳುತಿತ್ತು. ಆದರೆ ಈ ಸರಣಿಯಿಂದ ಆರಂಭಗೊಂಡು ಇನ್ನು ಮುಂದೆ ಬಯೋ ಬಬಲ್ ನಲ್ಲಿ ಇರಬೇಕಾದ ಅಗತ್ಯ ಇಲ್ಲ ಎನ್ನುವುದಾಗಿ ಅಧಿಕೃತವಾಗಿ ಬಿಸಿಸಿಐ ಮೂಲಗಳು ಘೋಷಿಸಿವೆ. ಕೆ ಎಲ್ ರಾಹುಲ್ ನಾಯಕತ್ವ ವನ್ನು ತೆಗೆದುಕೊಳ್ಳುತ್ತಿದ್ದಂತೆಯೇ ಆಟಗಾರರಿಗೆ ಅದೃಷ್ಟ ಖುಲಾಯಿಸಿದ ಎಂಬುದಾಗಿ ಎಲ್ಲರೂ ಮಾತನಾಡಿಕೊಳ್ಳಲು ಆರಂಭಿಸಿದ್ದಾರೆ. ಈ ವಿಚಾರದ ಕುರಿತಂತೆ ನಿಮ್ಮ ಅನಿಸಿಕೆಗಳನ್ನು ನಮ್ಮೊಂದಿಗೆ ತಪ್ಪದೆ ಹಂಚಿಕೊಳ್ಳಿ.

Get real time updates directly on you device, subscribe now.